ಚಾಮರಾಜನಗರ

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ.

ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹುಲಿಯೊಂದು ಅವರ ಬಳಿ ಬಂದಿದೆ. ಹುಲಿಯನ್ನು ಕಂಡ ಪುಟ್ಟಯ್ಯ ಗಾಬರಿಗೊಂಡು ಸ್ಥಳದಲ್ಲೇ ನಿಂತಿದ್ದಾರೆ. ಕೆಲ ಕ್ಷಣ ರೈತನನ್ನು ನೋಡಿದ ಹುಲಿ ಬಳಿಕ ಯಾವುದೇ ಹಾನಿ ಮಾಡದೆ ಸಮೀಪದ ಕಬ್ಬಿನ ಗದ್ದೆಯೊಳಗೆ ನುಗ್ಗಿದೆ.

ಬಳಿಕ ರೈತ ಪುಟ್ಟಯ್ಯ ಪಕ್ಕದಲ್ಲಿಯೇ ಇದ್ದ ಮರವನ್ನು ಏರಿ ತನ್ನ ಮೊಬೈಲ್‌ನಲ್ಲಿ ಹುಲಿ ಓಡುವ ವಿಡಿಯೋ ಮಾಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಹುಲಿ ಹೆಜ್ಜೆ ಎಂದು ಖಚಿತಪಡಿಸಿದ್ದಾರೆ. ಬಳಿಕ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.

ಹುಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಅರಣ್ಯ ಇಲಾಖೆಯ ಅಽಕಾರಿಗಳು ಹುಲಿಯನ್ನು ಸೆರೆಹಿಡಿಯಬೇಕು ಎಂದು ಮುಖಂಡ ಬಾಗಳಿ ರೇವಣ್ಣ ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಕಷ್ಟಕ್ಕೆ ಸಿಲುಕಿದ ಸರ್ಕಾರಕ್ಕೆ ವರದಾನವಾದ ಕಬಿನಿ

ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ…

39 seconds ago

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

22 hours ago