ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ.
ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿದ್ದವು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ.
ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣ ಸಿಗುತ್ತಿವೆ.
ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರವನ್ನು ಅಕ್ಟೋಬರ್.2, 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.
ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಇಂದು ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…