ಚಾಮರಾಜನಗರ

ಹನೂರು| ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿ ದರ್ಶನ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ.

ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿದ್ದವು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ.

ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣ ಸಿಗುತ್ತಿವೆ.

ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರವನ್ನು ಅಕ್ಟೋಬರ್.2, 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.

ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಇಂದು ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

6 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

49 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago