ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ.
ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿದ್ದವು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ.
ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣ ಸಿಗುತ್ತಿವೆ.
ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರವನ್ನು ಅಕ್ಟೋಬರ್.2, 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.
ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಇಂದು ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.
ಕೆ.ಬಿ.ರಮೇಶನಾಯಕ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಡ್ರಗ್ಸ್ ಮಾರಾಟ, ಸೇವನೆಯನ್ನು ಬುಡಸಮೇತ ಕಿತ್ತು ಹಾಕುವುದರ ಜತೆಗೆ, ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯದ ಮೇಲೆ…
ಆಂದೋಲನ ವಿಶೇಷ ಸಂದರ್ಶನದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಮ್ಮೆಯ ನುಡಿ ಆಂದೋಲನ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರೈಸಿದ್ದು,…
ಮಂಜು ಕೋಟೆ ೪೦ ವರ್ಷಗಳ ಕಾಲ ಆದಿವಾಸಿಗಳ ಪರ ಹೋರಾಟ ನಡೆಸಿದ ದಿಟ್ಟ ಮಹಿಳೆ ಸೋಮಮ್ಮ ಇನ್ನು ನೆನಪು ಮಾತ್ರ…
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…