ಚಾಮರಾಜನಗರ

ಹನೂರು| ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿ ದರ್ಶನ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್‌ ಖುಷ್‌ ಆಗಿದೆ.

ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಕಾಣಿಸಿಕೊಂಡು ಒಣ ಹುಲ್ಲು ಹಾಗೂ ಸಣ್ಣ ಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿದ್ದವು. ತದನಂತರ ಮೂರ್ನಾಲ್ಕು ದಿನಗಳ ಕಾಲ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ.

ಇದೀಗ ಅರಣ್ಯವು ಅಚ್ಚಹಸಿರಿನಿಂದ ಕಂಗೊಳಿಸುತ್ತಿರುವುದರಿಂದ ಸಫಾರಿಗೆ ತೆರಳುವ ವನ್ಯ ಪ್ರಿಯರಿಗೆ ಒಂದಲ್ಲ ಒಂದು ಪ್ರಾಣಿಗಳು ಕಾಣ ಸಿಗುತ್ತಿವೆ.

ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸಫಾರಿ ಕೇಂದ್ರವನ್ನು ಅಕ್ಟೋಬರ್.2, 2024ರಂದು ಪ್ರಾರಂಭಿಸಲಾಗಿತ್ತು. ಆದರೆ ಇದುವರೆಗೂ ಒಮ್ಮೆಯೂ ಹುಲಿರಾಯ ದರ್ಶನ ನೀಡಿರಲಿಲ್ಲ.

ಅಜ್ಜೀಪುರ ಸಫಾರಿ ಕೇಂದ್ರದಿಂದ ತೆರಳುವ ಪ್ರವಾಸಿಗರಿಗೆ ಆನೆ ಕಾಡೆಮ್ಮೆ, ಜಿಂಕೆ, ಕಡವೆ, ಕರಡಿ, ತೋಳ ನರಿ ಇನ್ನಿತರ ಪ್ರಾಣಿಗಳು ಮಾತ್ರ ಕಾಣಿಸಿಕೊಂಡಿದ್ದವು. ಇಂದು ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯ ಕಾಣಿಸಿಕೊಳ್ಳುತ್ತಿದ್ದಂತೆ ತಮ್ಮ ಮೊಬೈಲ್ ಹಾಗೂ ಕ್ಯಾಮರದಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಎಂಟು ಜನ ಬೆಂಗಳೂರು ಮೂಲದ ಪ್ರವಾಸಿಗರು ಸಫಾರಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago