ಚಾಮರಾಜನಗರ

ಜಮೀನಲ್ಲಿ ಹುಲಿ ದರ್ಶನ ; ಮುಂದುವರಿದ ಕೂಂಬಿಂಗ್

ಗುಂಡ್ಲುಪೇಟೆ : ತಾಲ್ಲೂಕಿನ ದೇಶಿಪುರ ಕಾಲೋನಿಯಲ್ಲಿ ಪುಟ್ಟಮ್ಮ ಎಂಬ ಗಿರಿಜನ ಮಹಿಳೆ ಹುಲಿ ದಾಳಿಯಿಂದ ಮೃತಪಟ್ಟ ಬಳಿಕ ಆತಂಕದಲ್ಲಿರುವ ಜನತೆಗೆ ಈಗ ಹಾಲಹಳ್ಳಿ ಜಮೀನೊಂದರಲ್ಲಿ ಕುಳಿತು ಘರ್ಜಿಸುತ್ತಿರುವ ಹುಲಿಯ ದರ್ಶನವಾಗಿರುವುದು ಕಂಗಾಲಾಗಿಸಿದೆ.

ಜಮೀನಿನಲ್ಲಿ ಹುಲಿ ಕುಳಿತು ಗರ್ಜಿಸುತ್ತಿದ್ದುದನ್ನು ಜಮೀನಿನವರು ದೂರದಿಂದಲೇ ನೋಡಿ ವಿಡಿಯೋ ಮಾಡಿದ್ದು, ಅದು ಎಲ್ಲೆಡೆ ಹರಿದಾಡುತ್ತಿದೆ. ಹುಲಿ ಕಾಣಿಸಿಕೊಂಡಿರುವ ವಿಚಾರ ಈಗ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ.
ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ಹೊರವಲಯದ ತೋಟಪ್ಪ ಎಂಬವರ ಜಮೀನಿನಲ್ಲಿ ಪಂಪ್‌ಸೆಟ್ ಮನೆ ಮೇಲೆ ಕುಳಿತು ಗರ್ಜಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಇದನ್ನೂ ಓದಿ: ಚಾಮರಾಜನಗರ | ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ

ತಾಲ್ಲೂಕಿನ ಹಾಲಹಳ್ಳಿ, ಸೋಮಹಳ್ಳಿ, ಪಡಗೂರು, ಸಂಪಿಗೆಪುರ, ಕಲ್ಲಹಳ್ಳಿ, ಕುರುಬರಹುಂಡಿ ಸೇರಿದಂತೆ ಅನೇಕ ಕಡೆಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು ಮನುಷ್ಯರ ಮೇಲೆ ಅದು ದಾಳಿ ಮಾಡುವ ಮೊದಲೇ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತ ಮಹಿಳೆ ಕೊಂದು ಹಾಕಿದ್ದ ಹುಲಿ ಸೆರೆಗೆ ದೇಶಿಪುರ ಕಾಲೋನಿಯಲ್ಲಿ ಆನೆಯೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ನಡೆಸುತ್ತಿದ್ದಾರೆ. ಆದರೆ, ಹುಲಿಯ ಚಲನವಲನ ಕಂಡುಬಂದಿಲ್ಲ.

ಆಂದೋಲನ ಡೆಸ್ಕ್

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

8 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

10 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

10 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

10 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

12 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

12 hours ago