Tiger spotted in Hanur
ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ ಮಾರ್ಗವಾಗಿ ಕಡಂಬೂರಿಗೆ ಟ್ರಾಕ್ಟರ್ ಮೂಲಕ ತೆರಳುತ್ತಿದ್ದಾಗ ಹುಲಿ ಪ್ರತ್ಯಕ್ಷವಾಗಿದೆ. ಇದನ್ನು ಕಂಡ ವೆಂಕಟೇಶ್ ಹಾಗೂ ಸ್ನೇಹಿತರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ವನ್ಯಜೀವಿ ಪ್ರಿಯರು ಹಾಗೂ ಸಾರ್ವಜನಿಕರು ಹುಲಿಯ ವಿಡಿಯೋ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ೫ ಹುಲಿಗಳು ಮೃತಪಟ್ಟಿದ್ದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ನಾವು ಸ್ಥಳಕ್ಕೆ ಭೇಟಿ ನೀಡಲು ತೆರಳಿದ ವೇಳೆ ಗಂಡು ಹುಲಿ ಕಾಣಿಸಿಕೊಂಡಿತ್ತು. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಹುಲಿಗಳು ಸಂಚಾರ ಮಾಡುತ್ತಿವೆ. ಪ್ರತಿಯೊಬ್ಬರೂ ವನ್ಯ ಪ್ರಾಣಿಯನ್ನು ಸಂರಕ್ಷಣೆ ಮಾಡಬೇಕು ಎಂದು ಡಿಸಿಎಫ್ ಭಾಸ್ಕರ್ ಮನವಿ ಮಾಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…