Tiger spotted in Hanur
ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ ಮಾರ್ಗವಾಗಿ ಕಡಂಬೂರಿಗೆ ಟ್ರಾಕ್ಟರ್ ಮೂಲಕ ತೆರಳುತ್ತಿದ್ದಾಗ ಹುಲಿ ಪ್ರತ್ಯಕ್ಷವಾಗಿದೆ. ಇದನ್ನು ಕಂಡ ವೆಂಕಟೇಶ್ ಹಾಗೂ ಸ್ನೇಹಿತರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ವನ್ಯಜೀವಿ ಪ್ರಿಯರು ಹಾಗೂ ಸಾರ್ವಜನಿಕರು ಹುಲಿಯ ವಿಡಿಯೋ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ೫ ಹುಲಿಗಳು ಮೃತಪಟ್ಟಿದ್ದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ನಾವು ಸ್ಥಳಕ್ಕೆ ಭೇಟಿ ನೀಡಲು ತೆರಳಿದ ವೇಳೆ ಗಂಡು ಹುಲಿ ಕಾಣಿಸಿಕೊಂಡಿತ್ತು. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಹುಲಿಗಳು ಸಂಚಾರ ಮಾಡುತ್ತಿವೆ. ಪ್ರತಿಯೊಬ್ಬರೂ ವನ್ಯ ಪ್ರಾಣಿಯನ್ನು ಸಂರಕ್ಷಣೆ ಮಾಡಬೇಕು ಎಂದು ಡಿಸಿಎಫ್ ಭಾಸ್ಕರ್ ಮನವಿ ಮಾಡಿದ್ದಾರೆ.
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…