ಚಾಮರಾಜನಗರ

ಹನೂರು | ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷ..!

ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ ಮಾರ್ಗವಾಗಿ ಕಡಂಬೂರಿಗೆ ಟ್ರಾಕ್ಟರ್ ಮೂಲಕ ತೆರಳುತ್ತಿದ್ದಾಗ ಹುಲಿ ಪ್ರತ್ಯಕ್ಷವಾಗಿದೆ. ಇದನ್ನು ಕಂಡ ವೆಂಕಟೇಶ್ ಹಾಗೂ ಸ್ನೇಹಿತರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ವನ್ಯಜೀವಿ ಪ್ರಿಯರು ಹಾಗೂ ಸಾರ್ವಜನಿಕರು ಹುಲಿಯ ವಿಡಿಯೋ ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ. ೫ ಹುಲಿಗಳು ಮೃತಪಟ್ಟಿದ್ದ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ನಾವು ಸ್ಥಳಕ್ಕೆ ಭೇಟಿ ನೀಡಲು ತೆರಳಿದ ವೇಳೆ ಗಂಡು ಹುಲಿ ಕಾಣಿಸಿಕೊಂಡಿತ್ತು. ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಹೂಗ್ಯಂ ವಲಯ ವ್ಯಾಪ್ತಿಯಲ್ಲಿ ಹುಲಿಗಳು ಸಂಚಾರ ಮಾಡುತ್ತಿವೆ. ಪ್ರತಿಯೊಬ್ಬರೂ ವನ್ಯ ಪ್ರಾಣಿಯನ್ನು ಸಂರಕ್ಷಣೆ ಮಾಡಬೇಕು ಎಂದು ಡಿಸಿಎಫ್ ಭಾಸ್ಕರ್ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

34 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago