ಚಾಮರಾಜನಗರ

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ ಹುಲಿ ಓಡಾಡುತ್ತಿರುವುದರಿಂದ ಜನರು ಆತಂಕದಲ್ಲಿಯೇ ಜೀವನ ಕಳೆಯುತ್ತಿದ್ದು, ಆದಷ್ಟು ಬೇಗ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.

ಕಳೆದ ಒಂದು ವಾರದಿಂದ ನಿರಂತರವಾಗಿ ಹುಲಿಯೊಂದು ಚಂಗಡಿ ಗ್ರಾಮದ ಮನೆಗಳ ಸಮೀಪವೇ ಓಡಾಡುತ್ತಿದೆ. ಮನೆಗಳಲ್ಲಿ ವಯಸ್ಸಾದವರು ವಯೋವೃದ್ಧರೆ ಇರುವುದರಿಂದ ರಾತ್ರಿ ವೇಳೆ ಹುಲಿ ದಾಳಿ ನಡೆಸಿದರೆ ಇದಕ್ಕೆ ಯಾರೋ ಹೊಣೆ, ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದ ಕೆಲವು ಮನೆಗಳಲ್ಲಿ ಶೌಚಾಲಯ ಇಲ್ಲದೆ ಇರುವುದರಿಂದ ಬಯಲಿನಲ್ಲಿ ಶೌಚಾಲಯಕ್ಕೆ ಹೋಗುತ್ತಾರೆ. ಇಂತಹ ವೇಳೆ ಹುಲಿ ದಾಳಿ ನಡೆಸಿ ಸರ್ಕಾರದಿಂದ ಪರಿಹಾರ ನೀಡಿದರೆ ಏನು ಪ್ರಯೋಜನ ಅದರ ಬದಲು ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡಿದರೆ ರೈತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಿಲಿದೆ.

ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

11 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

11 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

11 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

11 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

11 hours ago