ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ ಹುಲಿ ಓಡಾಡುತ್ತಿರುವುದರಿಂದ ಜನರು ಆತಂಕದಲ್ಲಿಯೇ ಜೀವನ ಕಳೆಯುತ್ತಿದ್ದು, ಆದಷ್ಟು ಬೇಗ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರವಾಗಿ ಹುಲಿಯೊಂದು ಚಂಗಡಿ ಗ್ರಾಮದ ಮನೆಗಳ ಸಮೀಪವೇ ಓಡಾಡುತ್ತಿದೆ. ಮನೆಗಳಲ್ಲಿ ವಯಸ್ಸಾದವರು ವಯೋವೃದ್ಧರೆ ಇರುವುದರಿಂದ ರಾತ್ರಿ ವೇಳೆ ಹುಲಿ ದಾಳಿ ನಡೆಸಿದರೆ ಇದಕ್ಕೆ ಯಾರೋ ಹೊಣೆ, ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದ ಕೆಲವು ಮನೆಗಳಲ್ಲಿ ಶೌಚಾಲಯ ಇಲ್ಲದೆ ಇರುವುದರಿಂದ ಬಯಲಿನಲ್ಲಿ ಶೌಚಾಲಯಕ್ಕೆ ಹೋಗುತ್ತಾರೆ. ಇಂತಹ ವೇಳೆ ಹುಲಿ ದಾಳಿ ನಡೆಸಿ ಸರ್ಕಾರದಿಂದ ಪರಿಹಾರ ನೀಡಿದರೆ ಏನು ಪ್ರಯೋಜನ ಅದರ ಬದಲು ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡಿದರೆ ರೈತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಿಲಿದೆ.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…