ಚಾಮರಾಜನಗರ

ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದ ಆರ್‌ಟಿಓ ಸರ್ಕಲ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳದ ಮಲಪ್ಪುರಂ ನಿವಾಸಿ ಜಾಸ್ಮೀನ್‌ ಎಂಬಾತನಿಗೆ ಗಂಭೀರ ಗಾಯಗಳಾಗಿದೆ.

ಘಟನೆಯಲ್ಲಿ ಜಾಸ್ಮೀನ್‌ಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕ್‌ಗೆ ಟಿಪ್ಪರ್‌ ಗುದ್ದಿ ಸುಮಾರು 20 ಮೀಟರ್‌ ದೂರ ಎಳೆದೊಯ್ದಿದೆ. ಇದರಿಂದ ಬೈಕ್‌ ಸವಾರ ಜಾಸ್ಮೀನ್‌ ಕಾಲು ಸಂಪೂರ್ಣ ಸಜ್ಜುಗುಜ್ಜಾಗಿದೆ.

ಘಟನೆ ನಡೆಯುತ್ತಿದ್ದಂತೆ ಟಿಪ್ಪರ್‌ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

5 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

5 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

5 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

5 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

15 hours ago