ಚಾಮರಾಜನಗರ

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ ನಡೆದಿದೆ.

ಪಟ್ಟಣದ ಹೊರವಲಯದ ಮಲ್ಲಯ್ಯನಪುರ ಗೇಟ್ ಬಳಿ ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟು, ಮಗು ಮತ್ತು ಗಂಡನಿಗೆ ತೀವ್ರ ಗಾಯಗಳಾಗಿವೆ.

ಗುಂಡ್ಲುಪೇಟೆಯಿಂದ ಕೇರಳಕ್ಕೆ ಎಂಸೆಂಡ್ ತುಂಬಿಸಿಕೊಂಡು ಹೋಗುತ್ತಿದ್ದ ಕರ್ನಾಟಕದ ಕೆಎಲ್‌47 ಎಂ 3272 ಸಂಖ್ಯೆಯ ಟಿಪ್ಪರ್, ಕೇರಳದ ಕ್ಯಾಲಿಕಟ್ ಕಡೆಯಿಂದ ಬರುತ್ತಿದ್ದ 23 ಬಿಹೆಚ್‌ 9341 ಕೆ ಸಂಖ್ಯೆಯ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ ನಿಶಾ ನೂರಿ (37) ಮತ್ತು ಅವರ ಮಗಳು ನೂಹ (18) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಡ ಮಹಮ್ಮದ್ ಅಜೀರ್ (41) ಮತ್ತು ಮಗ ನಹಿಯಾನ್ (9) ತೀವ್ರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ.

ಪಟ್ಟಣದಲ್ಲಿ ಟಿಪ್ಪರ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ವಿಶೇಷವಾಗಿ ಕೇರಳದ ನಂಬರ್ ಪ್ಲೇಟ್‌ಗಳ ಟಿಪ್ಪರ್‌ಗಳ ಹಾವಳಿ ಹೆಚ್ಚಾಗಿರುವುದರಿಂದ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಪುನರಾವರ್ತನೆಯಾಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಟಿಪ್ಪರ್‌ಗಳ ಮೇಲೆ ಕಟ್ಟುನಿಟ್ಟಾದ ನಿಯಂತ್ರಣ ಹೇರಲು ಜಿಲ್ಲಾಧಿಕಾರಿ, ಆರ್‌ಟಿಒ ಮತ್ತು ಸ್ಥಳೀಯ ಶಾಸಕರು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟಿಪ್ಪರ್ ಅನ್ನು ವಶಪಡಿಸಿಕೊಂಡಿದ್ದಾರೆ. ಮೃತದೇಹಗಳನ್ನು ಪಟ್ಟಣದ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಟುಂಬಸ್ಥರು ಬಂದ ನಂತರ ದೂರು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

55 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

59 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago