ಚಾಮರಾಜನಗರ

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ಟಾಟಾ ಎಸ್ ವಾಹನದಲ್ಲಿದ್ದ 9 ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಅಸ್ಪತ್ರೆಗೆ ಪೋಷಕರೆ ಕರೆದೋಯ್ದ ಘಟನೆ ನಡೆದಿದೆ.

ಸನ್ ಜಾನ್ಸ್ ಶಾಲೆಯಲ್ಲಿ ಒದುತ್ತಿರುವ ಮಕ್ಕಳಾಗಿದ್ದು ಶಿಂಡನಪುರ, ಕಂದೆಗಾಲ ಗ್ರಾಮದಿಂದ ಮಕ್ಕಳನ್ನು ಪ್ರತಿನಿತ್ಯ ಬೆಳಿಗ್ಗೆ ಸಂಜೆ ಕರೆದೊಯ್ಯುತಿದ್ದರು. ಟಿಪ್ಪರ್ ಎಕಾಏಕಿ ಬಂದು ಗುದ್ದಿದ ಪರಿಣಾಮ ಚಾಲಕನಿಗೆ ತಲೆ ಕಾಲಿಗೆ ಬಲವಾದ ಪೆಟ್ಟುಬಿದ್ದಿದ್ದು, 9 ಮಕ್ಕಳಿಗೆ ಕೈ ಕಾಲು ಮುರಿತದಿಂದ ಗಂಭೀರ ಗಾಯವಾಗಿದ್ದು ಪೋಷಕರ ಆಕ್ರಂದಣ ಮುಗಿಲು ಮುಟ್ಟಿತ್ತು.

ತಾಲ್ಲೂಕಿನಲ್ಲಿ ಟಿಪ್ಪರ್ ಗಳ ಹಾವಳಿ ಹೆಚ್ಚಿದ್ದು, ಶಾಲಾ ಸಮಯದಲ್ಲಿ ಟಿಪ್ಪರ್ ಗಳ ನಿಷೇಧ ಮಾಡಬೇಕು ಹಾಗೂ ಅಧಿಕ ಬಾರಹೊತ್ತ ಟಿಪ್ಪರ್ ಹಾಗೂ ಕಂಟೆನರ್ ಗಳಿಗೆ ಕಡಿವಾಣ ಹಾಕಬೇಕು. ಪ್ರತಿನಿತ್ಯ ಟಿಪ್ಪರ್ ಗಳ ಅಬ್ಬರ ಹೆಚ್ಚಾಗಿದ್ದು ವಾಹನ ಸವಾರರು ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ ಎಂದು ಸಾರ್ವಜನಿಕರು ಆರೋಪಿದ್ದಾರೆ.

ಆರ್ ಟಿಓ, ಗಣಿ ಇಲಾಖೆ ಪೊಲೀಸರ ವೈಪಲ್ಯ ; ಆರೋಪ
ಟಿಪ್ಪರ್ ಗಳ ಡ್ರೈವರ್ ಗಳು ಕುಡಿದು ಚಾಲನೆ ಮಾಡುತಿದ್ದು ಅಧಿಕ ಬಾರ ಹೊತ್ತು ಮನ ಬಂದಂತೆ ಚಾಲನೆ ಮಾಡುತ್ತಿರುವ ಕಾರಣ ಅಪಘಾತಗಳು ಹೆಚ್ಚುತಿದ್ದು, ನೂರಾರು ಸಂಖ್ಯೆಯ ಟಿಪ್ಪರ್ಗಳು ಒಡಾಡುತ್ತಿದ್ದು ಅಧಿಕ ಭಾರ,ಪರ್ಮಿಟ್ ಇಲ್ಲದ ವಾಹನಗಳ ಮೇಲೆ ಗಣಿ ಇಲಾಖೆ, ಪೊಲಿಸರು, ಆರ್ ಟಿಓ ಅದಿಕಾರಿಗಳು ಕ್ರಮ ವಹಿಸದೆ ಇರುವ ಕಾರಣ ತಾಲ್ಲೂಕಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಅಡಳಿತ ವ್ಯವಸ್ಥೆ ಸರಿಯಿಲ್ಲ ತಾಲ್ಲೂಕಿನಲ್ಲಿ ಹೆಳುವವರು ಕೇಳುವವರು ಇಲ್ಲ ರಾತ್ರಿ ಬೆಳಿಗ್ಗೆ ಎನ್ನದೆ ಎಲ್ಲಾ ಸಮಯದಲ್ಲಿ ಟಿಪ್ಪರ್ ಅಬ್ಬರದಿಂದ ಜನಸಾಮಾನ್ಯರು ಓಡಾಡುವುದೇ ಕಷ್ಟವಾಗಿದೆ ಎಂದು ಪೋಷಕ ರಘು ಆರೊಪಿಸಿದ್ದಾರೆ.

ಕೇರಳದಲ್ಲಿ ಶಾಲೆಗೆ ತೆರಳುವ ಸಮಯದಲ್ಲಿ ವಾಹನಗಳಿಗೆ ಕಡಿವಾಣ
ಕೆರಳದಲ್ಲಿ ಶಾಲೆಗೆ ತೆರಳುವಾಗ ಮತ್ತು ಶಾಲೆ ಬಿಡುವಾಗ ಭಾರಿ ವಾಹನಗಳ ಪಾಲನೆ ಇರುವುದಿಲ್ಲ‌ ಮತ್ತು ಶಾಲಾ ಸಮಯದಲ್ಲಿ ವಾಹನ ಚಾಲನೆ ನಿಧಾನವಾಗಿರುತ್ತದೆ. ಆದರೆ ಕೇರಳ ಸಂಖ್ಯೆಯ ಟಿಪ್ಪರ್ ಕಂಟೇನರ್ ಗಳನ್ನು ತಂದು ಗುಂಡ್ಲುಪೇಟೆ ತಾಲ್ಲೂಕಿನ ಜನತೆಯ ಪ್ರಾಣ ಕಸಿಯುವ ಕೆಲಸ ನಡೆಯುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

12 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

7 hours ago