Mysore
28
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ ಎನ್ನಲಾಗಿದೆ.

ಇದರಿಂದ ಚಾಲಕನ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ವಿಷಯ ತಿಳಿದು ಸ್ಥಳಕ್ಕೆ ತರಳಿದ ಪೊಲೀಸರು ಮೃತದೇಹವನ್ನು ಸಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ವೈದ್ಯರು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರಿಗೆ ಒಪ್ಪಿಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!