ಚಾಮರಾಜನಗರ

ಇಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸ: ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ

ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕದ ಉದ್ಘಾಟನೆ ನೆರವೇರಿಸಲಿದ್ದಾರೆ.

ಆ ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಪ್ರದೇಶದಲ್ಲಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಭರಚುಕ್ಕಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ.

ಇನ್ನು ಈ ಬಾರಿ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಲಪಾತೋತ್ಸವ ಆಯೋಜನೆ ಮಾಡಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅದ್ಧೂರಿ  ಚಾಲನೆ ನೀಡಲಿದ್ದಾರೆ.

ಭರಚುಕ್ಕಿ ಜಲಪಾತೋತ್ಸವದಲ್ಲಿ ಸಚಿವರಾದ ಎಚ್‌.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್‌, ಕೆ.ವೆಂಕಟೇಶ್‌ ಸೇರಿದಂತೆ ಹಲವು ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ.

ಇನ್ನು ಭರಚುಕ್ಕಿ ಪ್ರದೇಶದಲ್ಲೂ ಅಂತಿಮ ಸಿದ್ಧತಾ ಕಾರ್ಯ ನಡೆದಿದ್ದು, ಸಂಜೆ ಕಾರ್ಯಕ್ರಮವಾದ್ದರಿಂದ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇಂದಿನ ಕಾರ್ಯಕ್ರಮದಲ್ಲಿ ಹಲವು ಪ್ರವಾಸಿಗರು ಭರಚುಕ್ಕಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

7 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

7 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

7 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

7 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

7 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

7 hours ago