ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕದ ಉದ್ಘಾಟನೆ ನೆರವೇರಿಸಲಿದ್ದಾರೆ.
ಆ ಬಳಿಕ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಪ್ರದೇಶದಲ್ಲಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಭರಚುಕ್ಕಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ.
ಇನ್ನು ಈ ಬಾರಿ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೊರೆಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಲಪಾತೋತ್ಸವ ಆಯೋಜನೆ ಮಾಡಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡಲಿದ್ದಾರೆ.
ಭರಚುಕ್ಕಿ ಜಲಪಾತೋತ್ಸವದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್ ಸೇರಿದಂತೆ ಹಲವು ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ.
ಇನ್ನು ಭರಚುಕ್ಕಿ ಪ್ರದೇಶದಲ್ಲೂ ಅಂತಿಮ ಸಿದ್ಧತಾ ಕಾರ್ಯ ನಡೆದಿದ್ದು, ಸಂಜೆ ಕಾರ್ಯಕ್ರಮವಾದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇಂದಿನ ಕಾರ್ಯಕ್ರಮದಲ್ಲಿ ಹಲವು ಪ್ರವಾಸಿಗರು ಭರಚುಕ್ಕಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…