ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಮೈಸೂರು, ಗುಂಡ್ಲುಪೇಟೆ, ತೆರಕಣಾಂಬಿ ಮಾರುಕಟ್ಟೆಗೆ ಹೋಲಿಸಿದರೆ ಚಿಕ್ಕಹೊಳೆಯಲ್ಲಿ ಟೊಮೆಟೊ ಬೆಲೆಯನ್ನು ತೀವ್ರ ಇಳಿಸಲಾಗಿದೆ. 5ರಿಂದ 6 ರೂ.ವರೆಗೆ ದರ ಇಳಿಕೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಮೂಹಿಕ ನಾಯಕತ್ವದ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಮಾತನಾಡಿ ,ಯಾವ ಮಾನದಂಡದ ಮೇಲೆ ಟೊಮೆಟೊ ಬೆಲೆಯನ್ನು ನಿಗದಿಪಡಿಸಲಾಗಿದೆ. ಬೆಲೆ ದಿಢೀರ್ ಕುಸಿಯಲು ಕಾರಣ ಯಾರು? ನೆರೆಯ ಮೈಸೂರು, ಜಿಲ್ಲೆಗೊಂದು ದರ, ಚಾಮರಾಜನಗರ ಜಿಲ್ಲೆಗೊಂದು ದರ ನಿಗದಿ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.
ರೈತರ ನೆರವಿಗೆ ಧಾವಿಸಬೇಕಾಗಿರುವ ಎಪಿಎಂಸಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದು ಖಂಡನೀಯ. ರೈತರಿಂದ ಶೇ 10 ಕಮಿಷನ್ ವಸೂಲಿ ಮಾಡುತ್ತಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ತಡೆಯಬೇಕು, ರೈತರಿಗೆ ನ್ಯಾಯಯುತ ಬೆಲೆ ಕೊಡಿಸಬೇಕು ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್, ಮಾ 16ರಂದು ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರೈತರು ಹಾಗೂ ಕಮಿಷನ್ ಏಜೆಂಟರ್ ಸಭೆ ನಡೆಯಲಿದ್ದು ಎಲ್ಲರೂ ಭಾಗವಹಿಸಬೇಕು ಎಂದರು. ಜಿಲ್ಲಾಧಿಕಾರಿ ಸಭೆಯ ಬಳಿಕ ರೈತರೇ ಇಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ತೀರ್ಮಾನ ಮಾಡಿರುವುದಾಗಿ ಹೊನ್ನೂರು ಪ್ರಕಾಶ್ ಹೇಳಿದರು.
ಮುಖಂಡರಾದ ಅರಕಲವಾಡಿ ಮಹೇಶ್, ಕಿರಣ್ ಕೊತ್ತಲವಾಡಿ, ಮಂಜು, ಪುಣಜೂರು ಚಂದ್ರು, ರಂಗನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…