ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಮೈಸೂರು, ಗುಂಡ್ಲುಪೇಟೆ, ತೆರಕಣಾಂಬಿ ಮಾರುಕಟ್ಟೆಗೆ ಹೋಲಿಸಿದರೆ ಚಿಕ್ಕಹೊಳೆಯಲ್ಲಿ ಟೊಮೆಟೊ ಬೆಲೆಯನ್ನು ತೀವ್ರ ಇಳಿಸಲಾಗಿದೆ. 5ರಿಂದ 6 ರೂ.ವರೆಗೆ ದರ ಇಳಿಕೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಮೂಹಿಕ ನಾಯಕತ್ವದ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಮಾತನಾಡಿ ,ಯಾವ ಮಾನದಂಡದ ಮೇಲೆ ಟೊಮೆಟೊ ಬೆಲೆಯನ್ನು ನಿಗದಿಪಡಿಸಲಾಗಿದೆ. ಬೆಲೆ ದಿಢೀರ್ ಕುಸಿಯಲು ಕಾರಣ ಯಾರು? ನೆರೆಯ ಮೈಸೂರು, ಜಿಲ್ಲೆಗೊಂದು ದರ, ಚಾಮರಾಜನಗರ ಜಿಲ್ಲೆಗೊಂದು ದರ ನಿಗದಿ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.
ರೈತರ ನೆರವಿಗೆ ಧಾವಿಸಬೇಕಾಗಿರುವ ಎಪಿಎಂಸಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದು ಖಂಡನೀಯ. ರೈತರಿಂದ ಶೇ 10 ಕಮಿಷನ್ ವಸೂಲಿ ಮಾಡುತ್ತಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ತಡೆಯಬೇಕು, ರೈತರಿಗೆ ನ್ಯಾಯಯುತ ಬೆಲೆ ಕೊಡಿಸಬೇಕು ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್, ಮಾ 16ರಂದು ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರೈತರು ಹಾಗೂ ಕಮಿಷನ್ ಏಜೆಂಟರ್ ಸಭೆ ನಡೆಯಲಿದ್ದು ಎಲ್ಲರೂ ಭಾಗವಹಿಸಬೇಕು ಎಂದರು. ಜಿಲ್ಲಾಧಿಕಾರಿ ಸಭೆಯ ಬಳಿಕ ರೈತರೇ ಇಲ್ಲಿ ಮಾರಾಟ ಮಳಿಗೆಗಳನ್ನು ತೆರೆಯಲು ತೀರ್ಮಾನ ಮಾಡಿರುವುದಾಗಿ ಹೊನ್ನೂರು ಪ್ರಕಾಶ್ ಹೇಳಿದರು.
ಮುಖಂಡರಾದ ಅರಕಲವಾಡಿ ಮಹೇಶ್, ಕಿರಣ್ ಕೊತ್ತಲವಾಡಿ, ಮಂಜು, ಪುಣಜೂರು ಚಂದ್ರು, ರಂಗನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…