ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವು ಕೂಡ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ.
ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಈ ಬಾರಿಯೂ ಸಾಮೂಹಿಕ ವಿವಾಹ ನೆರವೇರಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಾಮೂಹಿಕ ವಿವಾಹಕ್ಕೆ ಬರುವ ವಧು ಹಾಗೂ ವರನ ಕಡೆಯವರಿಗೆ ಶ್ರೀ ಕ್ಷೇತ್ರದ ಪ್ರಾಧಿಕಾರ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.
ಈ ಬಾರಿ 63 ಜೋಡಿಗಳು ಅಂತಿಮವಾಗಿ ನೋಂದಣಿ ಮಾಡಿಕೊಂಡಿದ್ದು, ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ವಧುವಿಗೆ ನಾಲ್ಕು ಗ್ರಾಂ ಚಿನ್ನದ ತಾಳಿ, ಸೀರೆ, ಕಾಲುಂಗುರ, ವರನಿಗೆ ಶರ್ಟ್, ಶಲ್ಯ ವಿತರಣೆ ಮಾಡಲಾಗುತ್ತದೆ. ನಾಳೆ 63 ಜೋಡಿಗಳು ಮಾದಪ್ಪನ ಸನ್ನಿಧಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸಾರ್ವಜನಿಕರು ಭಾಗಿಯಾಗಲಿದ್ದು, ಎಲ್ಲರಿಗೂ ಕೂಡ ಬೆಟ್ಟದ ಪ್ರಾಧಿಕಾರದ ವತಿಯಿಂದ ಭೋಜನದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…