ಚಾಮರಾಜನಗರ

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು ಕೂಡ ಜನಜಂಗುಳಿಯಿಂದ ಕೂಡಿದೆ.

ತೆಪ್ಪವಿಹಾರದಲ್ಲಿ ಪ್ರವಾಸಿಗರು: ತಾಲ್ಲೂಕಿನ ಗಡಿ ಭಾಗದಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ ವೀಕೆಂಡ್ ರಜಾ ದಿನಗಳನ್ನು ಕಳೆಯಲು ಪ್ರವಾಸಿಗರು ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತೆಪ್ಪ ವಿಹಾರಕ್ಕೆ ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದು, ಜಲಪಾತ ವೀಕ್ಷಿಸಲು ಮುಗಿಬಿದ್ದರು.

ವರ್ಷಾಂತ್ಯದಲ್ಲಿ ಪ್ರವಾಸಿಗರ ದಂಡು: ಕರ್ನಾಟಕದ ನಯಾಗರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೆನಕಲ್ ಜಲಪಾತವನ್ನು ವೀಕ್ಷಿಸಲು ಮತ್ತು ಅಲ್ಲಿನ ಪ್ರೇಕ್ಷಣೀಯ ಕಲ್ಲು ಬಂಡೆಗಳ ನಡುವೆ ಚಿಮ್ಮುವ ನೀರಿನ ರಭಸದ ಜೊತೆಗೆ ಅಲ್ಲಿನ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿ ಪ್ರಕೃತಿಯ ಸೌಂದರ್ಯ ಸವಿಯುತ್ತಿದ್ದಾರೆ.

ಕಣ್ಮನ ಸೆಳೆಯುವ ತೆಪ್ಪವಿಹಾರ: ಜಲಪಾತ ವೀಕ್ಷಿಸಲು ಬಂದಂತ ಪ್ರವಾಸಿಗರು ತೆಪ್ಪದಲ್ಲಿ ತೆರಳುವ ವೇಳೆಯಲ್ಲಿ ಮೊಬೈಲ್ ನಲ್ಲಿ ವಿಹಾರವನ್ನು ಸೆರೆಹಿಡಿದು ಖುಷಿ ಪಡುತ್ತಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್‌ ಮಾಡುತ್ತಿದ್ದು, ತೆಪ್ಪಗಳು ಮಣಿ ಜೋಡಣೆಯಂತೆ ಒಂದರ ಹಿಂದೆ ಸಾಲಾಗಿ ಸಾಗುತ್ತಿರುವ ದೃಶ್ಯ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಬಳಿಕ ಅಲ್ಲಿ ಮಸಾಜ್ ಮಾಡಿಸಿಕೊಳ್ಳಲು ಸಹ ಪ್ರವಾಸಿಗರು ಮುಗಿಬಿದ್ದಿದ್ದು, ವರ್ಷಾಂತ್ಯದಿಂದ ಜಂಜಾಟದಲ್ಲಿದ್ದ ಪ್ರವಾಸಿಗರಿಗೆ ಉತ್ತಮ ವಾತಾವರಣ ಕಂಡು ಬಂದಿದೆ.

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

4 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

4 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

4 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

4 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

5 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

5 hours ago