ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು ಕೂಡ ಜನಜಂಗುಳಿಯಿಂದ ಕೂಡಿದೆ.
ತೆಪ್ಪವಿಹಾರದಲ್ಲಿ ಪ್ರವಾಸಿಗರು: ತಾಲ್ಲೂಕಿನ ಗಡಿ ಭಾಗದಲ್ಲಿರುವ ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ ವೀಕೆಂಡ್ ರಜಾ ದಿನಗಳನ್ನು ಕಳೆಯಲು ಪ್ರವಾಸಿಗರು ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತೆಪ್ಪ ವಿಹಾರಕ್ಕೆ ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸಿದ್ದು, ಜಲಪಾತ ವೀಕ್ಷಿಸಲು ಮುಗಿಬಿದ್ದರು.
ವರ್ಷಾಂತ್ಯದಲ್ಲಿ ಪ್ರವಾಸಿಗರ ದಂಡು: ಕರ್ನಾಟಕದ ನಯಾಗರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೆನಕಲ್ ಜಲಪಾತವನ್ನು ವೀಕ್ಷಿಸಲು ಮತ್ತು ಅಲ್ಲಿನ ಪ್ರೇಕ್ಷಣೀಯ ಕಲ್ಲು ಬಂಡೆಗಳ ನಡುವೆ ಚಿಮ್ಮುವ ನೀರಿನ ರಭಸದ ಜೊತೆಗೆ ಅಲ್ಲಿನ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿ ಪ್ರಕೃತಿಯ ಸೌಂದರ್ಯ ಸವಿಯುತ್ತಿದ್ದಾರೆ.
ಕಣ್ಮನ ಸೆಳೆಯುವ ತೆಪ್ಪವಿಹಾರ: ಜಲಪಾತ ವೀಕ್ಷಿಸಲು ಬಂದಂತ ಪ್ರವಾಸಿಗರು ತೆಪ್ಪದಲ್ಲಿ ತೆರಳುವ ವೇಳೆಯಲ್ಲಿ ಮೊಬೈಲ್ ನಲ್ಲಿ ವಿಹಾರವನ್ನು ಸೆರೆಹಿಡಿದು ಖುಷಿ ಪಡುತ್ತಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡುತ್ತಿದ್ದು, ತೆಪ್ಪಗಳು ಮಣಿ ಜೋಡಣೆಯಂತೆ ಒಂದರ ಹಿಂದೆ ಸಾಲಾಗಿ ಸಾಗುತ್ತಿರುವ ದೃಶ್ಯ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.
ಬಳಿಕ ಅಲ್ಲಿ ಮಸಾಜ್ ಮಾಡಿಸಿಕೊಳ್ಳಲು ಸಹ ಪ್ರವಾಸಿಗರು ಮುಗಿಬಿದ್ದಿದ್ದು, ವರ್ಷಾಂತ್ಯದಿಂದ ಜಂಜಾಟದಲ್ಲಿದ್ದ ಪ್ರವಾಸಿಗರಿಗೆ ಉತ್ತಮ ವಾತಾವರಣ ಕಂಡು ಬಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…