sighting of the tiger
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದ ಉಡುತೊರೆ ಹಳ್ಳದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ.
೧೫ ದಿನಗಳಿಂದ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ ಹಸಿರಿನಿಂದ ಕೂಡಿದ್ದು ಕೆರೆಗಳಲ್ಲಿ ನೀರು ಸಂಗ್ರಹವಾಗಿದೆ. ಇದಲ್ಲದೆ ಬೈಲೂರು ಅರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುತೊರೆ ಹಳ್ಳದಲ್ಲಿ ನೀರು ಬರಲು ಪ್ರಾರಂಭವಾಗಿದೆ.
ಬಿಸಿಲಿನ ಬೇಗೆಗೆ ಹುಲಿರಾಯ ದಣಿವಾರಿಸಿಕೊಳ್ಳಲು ನೀರಿನಲ್ಲಿದ್ದಾಗ ಸಫಾರಿಗೆ ಬಂದ ಪ್ರವಾಸಿಗರಿಗೆ ಹುಲಿ ಕಾಣಿಸಿಕೊಂಡಿದೆ. ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಆರು ಜನರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.
ಸುಮಾರು ಎರಡು ನಿಮಿಷ ೫೪ ಸೆಕೆಂಡ್ ಕಾಲ ಮೊಬೈಲ್ಗೆ ಪೋಸು ನೀಡಿದ ಹುಲಿ ನಂತರ ಪೊದೆಯತ್ತ ತೆರಳಿದೆ ಎಂದು ಬೀಟ್ ವಾಚರ್ ಅಶೋಕ್ ತಿಳಿಸಿದ್ದಾರೆ.
೨೦ ದಿನಗಳಲ್ಲಿ ಇದೇ ಹುಲಿ ಎರಡು ಬಾರಿ ಪ್ರವಾಸಿಗರಿಗೆ ಕಾಣಿಸಿಕೊಂಡಿರುವುದು ವಿಶೇಷ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…