tracter died
ಕೊಳ್ಳೇಗಾಲ : ಬೂದಿತಿಟ್ಟು ಗ್ರಾಮದಿಂದ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ಹಾಗೂ ಕೊಳ್ಳೇಗಾಲದಿಂದ ಚಾ.ನಗರಕ್ಕೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟ್ರಾಕ್ಟರ್ನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿರುವ ಘಟನೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಳೆಪಿಳ್ಳಾರಿ ದೇವಸ್ಥಾನದ ಬಳಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಉಡುಪಿ ಜಿಲ್ಲೆಯ ಕೊಂಗನಪಡಿ ಗ್ರಾಮದ ಅನಂತ ಪದ್ಮನಾಭ ಕೊಡಂಜಾಯ್ (೭೫) ಮೃತಪಟ್ಟವರು. ಅಲ್ಕೆರೆ ಅಗ್ರಹಾರ ಗ್ರಾಮದ ನಿಂಗರಾಜು ಮತ್ತು ಮಲ್ಲೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಬೂದಿತಿಟ್ಟು ಗ್ರಾಮದಿಂದ ಕಬ್ಬು ಕಟಾವು ಮಾಡಿ ಕುಂತೂರು ಸಕ್ಕರೆ ಕಾರ್ಖಾನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಯಳಂದೂರು ಪೊಲೀಸ್ ಇನ್ಸ್ಪೆಕ್ಟರ್ ಶ್ರೀಕಾಂತ್, ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ ತೆರಳಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…