ಕೊಳ್ಳೇಗಾಲ: ನಗರದ ಲಿಂಗಣಾಪುರ ಬಡಾವಣೆ ನಿವಾಸಿ ನಂದೀಶ್ ಸಾವು ಸಹಜವಲ್ಲ ಅದು ಕೊಲೆ ಎಂದು ಆರೋಪಿಸಿರುವ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಮಹದೇವ ಪ್ರಸಾದ್ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೊಳ್ಳೇಗಾಲದಲ್ಲಿ ಸರ್ವ ಸಮುದಾಯದ ಜನರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಹೀಗಿರುವಾಗ ಕೊಲೆ ಮಾಡಿ ಜಾತಿ ಜಾತಿಗಳ ನಡುವೆ ಸಂಘರ್ಷವಾಗುವಂತಹ ವಾತಾವರಣ ಸೃಷ್ಟಿ ಮಾಡಿರುವ ಆರೋಪಿಗಳಾದ ನಿತಿನ್, ಅಕ್ಷಯ್, ಕೌಶಿಕ್ ಹಾಗೂ ಅನುಷಾ ಎಂಬ ನಾಲ್ವರ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದು, ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕು. ಈ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಅಂತ ಒತ್ತಾಯಿಸಿದರು.
ಇನ್ನು ಈ ಪ್ರಕರಣದಲ್ಲಿ ಪೋಲಿಸರು ಸರಿಯಾದ ತನಿಖೆ ಮಾಡಿ ನ್ಯಾಯ ದೊರಕಿಸಿಕೊಡುತ್ತಾರೆಂಬ ನಂಬಿಕೆ ಇಲ್ಲದಾಗಿದ್ದು ನಂದೀಶ್ ಸಾವಿನ ಪ್ರಕರಣವನ್ನು ಸಿ.ಓ ಡಿ ತನಿಖೆಗೆ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷ ಪುಟ್ಟಣ್ಣ ಪ್ರಧಾನ ಕಾರ್ಯದರ್ಶಿ ಬಸವರಾಜು. ಸಂಚಾಲಕ ಇಂದ್ರೇಶ್ . ಚಾಮುಲ್ ನಿರ್ದೇಶಕ ಮಧುವನಹಳ್ಳಿ ನಂಜುಂಡಸ್ವಾಮಿ. ವೀರಶೈವ ಮುಖಂಡರಾದ ಮಹೇಶ್ ರುದ್ರಸ್ವಾಮಿ ಪ್ರದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…
ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…
ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…