ಚಾಮರಾಜನಗರ

ಗಂಧದ ಮರದ ಸಾಗಾಟ: ಆರೋಪಿಗಳಿಗೆ ಐದು ವರ್ಷ ಶಿಕ್ಷೆ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.

ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

33 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

39 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

48 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago