ಚಾಮರಾಜನಗರ

ಗಂಧದ ಮರದ ಸಾಗಾಟ: ಆರೋಪಿಗಳಿಗೆ ಐದು ವರ್ಷ ಶಿಕ್ಷೆ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.

ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ…

4 mins ago

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

25 mins ago

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ: ಕೇಂದ್ರ ಸಚಿವರಿಗೆ ಪತ್ರ ಬರೆದ ಶ್ರೀರಾಮುಲು

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ…

28 mins ago

ದಿ ಕೇರಳ ಸ್ಟೋರಿ 2 ಚಿತ್ರ ಬಿಡುಗಡೆಗೆ ಕೇರಳ ಹೈಕೋರ್ಟ್‌ ತಡೆ

ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್‌ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್‌, ಗುರುವಾರ…

59 mins ago

ಹಾಸನ| ರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ…

1 hour ago

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.…

1 hour ago