ಚಾಮರಾಜನಗರ

ಗಂಧದ ಮರದ ಸಾಗಾಟ: ಆರೋಪಿಗಳಿಗೆ ಐದು ವರ್ಷ ಶಿಕ್ಷೆ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.

ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

10 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

14 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

17 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

19 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

21 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

24 mins ago