ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.
ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…