ಚಾಮರಾಜನಗರ

ಗಂಧದ ಮರದ ಸಾಗಾಟ: ಆರೋಪಿಗಳಿಗೆ ಐದು ವರ್ಷ ಶಿಕ್ಷೆ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿಸಿ ಶ್ರೀಕಾಂತ್ ರವರು ತೀರ್ಪು ನೀಡಿದ್ದಾರೆ.

ಅರಣ್ಯ ಸಿಬ್ಬಂದಿಗಳಾದ ರಸುಲ್ ವಾಲಿಕರ್ ಮತ್ತು ಸಿಬ್ಬಂದಿಗಳು ಲೊಕ್ಕನಹಳ್ಳಿ ಕಳ್ಳಬೇಟೆ ಶಿಬಿರದಿಂದ ಲೊಕ್ಕನಹಳ್ಳಿ ಸೂಲರ್ ಗೇಟ್ ಕಡೆ ಹೋಗುವ ರಸ್ತೆ ಮಧ್ಯದಲ್ಲಿ 16-09-2020 ರಂದು ತೆರಳುತ್ತಿದ್ದಾಗ ನಾಲ್ವರು ಆರೋಪಿಗಳು 16 ಕೆಜಿ ಹಸಿ ಗಂಧದ ಮರದ ತುಂಡುಗಳು ಹಾಗೂ ಚಕ್ಕೆಗಳನ್ನು ಒಂದು ಬ್ಯಾಗಿನಲ್ಲಿ ಸಾಗಣೆ ಮಾಡುತ್ತಿದ್ದಾಗ ಹಿಡಿದು ಬಂಧಿಸಿ ಮಾಲುಗಳನ್ನು ಅಮಾನತುಪಡಿಸಿಕೊಳ್ಳಲಾಗಿತ್ತು . ಈ ಸಂಬಂಧ ಅಂದಿನ ಎ.ಸಿ ಎಫ್ ವನಿತಾ ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಪ್ರಕರಣದ ಮೊದಲ ಆರೋಪಿ ಮಾದೇವ ಆಲಿಯಾಸ್ ಕೋಣ್ಣುರ, ಮೂರನೇ ಆರೋಪಿ ರಂಗನಿಗೆ ಐದು ವರ್ಷ ಸರೆವಾಸ, ಐವತ್ತು ಸಾವಿರ ತಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲರಾದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ. ಪ್ರಕರಣದ ಎರಡನೇ ಆರೋಪಿ ಕುಂಬೇಗೌಡ ವಿಚಾರಣೆ ಸಮಯದಲ್ಲಿ ಮೃತಪಟ್ಟಿರುವುದರಿಂದ ಹಾಗೂ ನಾಲ್ಕನೇ ಆರೋಪಿ ಅಬ್ದುಲ್ ಜಮೀರ್ ಅನ್ನು ಅರಣ್ಯ ಕಾಯ್ದೆ ಕಾಲಂ 87 ರಡಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಇಬ್ಬರಿಗೆ ಶಿಕ್ಷೆ ವಿಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

4 mins ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

28 mins ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

56 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

4 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

21 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

22 hours ago