ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದರೂ ಕಳೆದ ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.
ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.
ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ.ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದಾರೆ. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆನೆಗೆ ಇಷ್ಟವಾದ ಕಬ್ಬು, ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದೆ. ಆದರೂ ಅಸ್ವಸ್ಥಗೊಂಡಿರುವ ಆನೆ ಮಾತ್ರ ಮೇಲೆಳುತ್ತಿಲ್ಲ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ರಕ್ಷಣೆ ಮಾಡಲು ಇನ್ನಿಲ್ಲದ ಪ್ರಯತ್ನ ಮುಂದುವರೆಸಿದ್ದಾರೆ.
ನೆರಳಿನ ವ್ಯವಸ್ಥೆ: ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಅಸ್ವಸ್ಥಗೊಂಡಿರುವ ಆನೆಗೆ ತೊಂದರೆಯಾಗದಂತೆ ಶಾಮಿಯಾನದ ವ್ಯವಸ್ಥೆ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಜಿತೇಂದ್ರ, ಉಪ ವಲಯ ಅರಣ್ಯ ಅಧಿಕಾರಿಗಳಾದ ವಿನಾಯಕ, ದಿನೇಶ್, ಅರಣ್ಯ ರಕ್ಷಕರಾದ ಸುರೇಶ್, ಚಿನ್ನಸ್ವಾಮಿ, ಭೀಮಪ್ಪ, ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…