ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು ಸನ್ಮಾನಿಸಿದರು.
ನಂತರ ಮಾತನಾಡಿದ ಎಈ ರಘು, ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಬಾಲ್ಯದಿಂದಲೇ ಕಷ್ಟಪಟ್ಟು ಓದಿ ಸಂಸ್ಕೃತ ವಿಷಯದಲ್ಲಿ ಪ್ರಬಂಧಗಳನ್ನು ಮಂಡಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ವಿಶೇಷ ಹಬ್ಬ ಹರಿದಿನಗಳು, ಜಾತ್ರಾ ಮಹೋತ್ಸವ ಅಮಾವಾಸ್ಯೆ ಸೇರಿದಂತೆ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಪ್ರತಿ ಕಾರ್ಯಕ್ರಮಗಳಿಗೂ ಮೆರಗು ತಂದಿದ್ದಾರೆ ಎಂದು ಹೇಳಿದರು.
ಶ್ರೀ ಸಾಲೂರು ಬೃಹನ್ ಮಠದ ವತಿಯಿಂದ ನಡೆಯುತ್ತಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಗರ ಪ್ರದೇಶಗಳ ಖಾಸಗಿ ಶಾಲೆಯಲ್ಲಿ ಸಿಗುವ ಶಿಕ್ಷಣದಂತೆ ಶ್ರೀ ಮಠದಲ್ಲಿಯೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದಲ್ಲದೆ ಬಿಡುವಿನ ವೇಳೆ ವಿಶೇಷವಾಗಿ ಸಂಸ್ಕೃತಕ್ಕೆ ಹೆಚ್ಚು ಒತ್ತು ನೀಡಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ ಎಂಬ ವಿಷಯ ಸಂಶೋಧನಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.
ಈ ವೇಳೆ ಪ್ರಾಧಿಕಾರದ ಆಗಮಿಕರಾದ ಕರವೀರ ಸ್ವಾಮಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್, ಹಿರಿಯ ಮುಖಂಡರಾದ ಪೊನ್ನಾಚಿ ಮಹಾದೇವಸ್ವಾಮಿ ಬೇಡಗಂಪಣ ಸಮುದಾಯದ ಗೌರವಾಧ್ಯಕ್ಷ ಪುಟ್ಟಣ್ಣ ಅಧ್ಯಕ್ಷ ಕೆ ವಿ ಮಾದೇಶ್, ಪಾರು ಪತ್ತೇದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಸಿಬ್ಬಂದಿಗಳಾದ ರವೀಂದ್ರ, ಉಮೇಶ್, ಸಂಪತ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…