ಚಾಮರಾಜನಗರ

ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು ಸನ್ಮಾನಿಸಿದರು.

ನಂತರ ಮಾತನಾಡಿದ ಎಈ ರಘು, ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರು ಬಾಲ್ಯದಿಂದಲೇ ಕಷ್ಟಪಟ್ಟು ಓದಿ ಸಂಸ್ಕೃತ ವಿಷಯದಲ್ಲಿ ಪ್ರಬಂಧಗಳನ್ನು ಮಂಡಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ವಿಶೇಷ ಹಬ್ಬ ಹರಿದಿನಗಳು, ಜಾತ್ರಾ ಮಹೋತ್ಸವ ಅಮಾವಾಸ್ಯೆ ಸೇರಿದಂತೆ ವಿಶೇಷ ಪೂಜೆಗಳಲ್ಲಿ ಭಾಗವಹಿಸಿ ಪ್ರತಿ ಕಾರ್ಯಕ್ರಮಗಳಿಗೂ ಮೆರಗು ತಂದಿದ್ದಾರೆ ಎಂದು ಹೇಳಿದರು.

ಶ್ರೀ ಸಾಲೂರು ಬೃಹನ್ ಮಠದ ವತಿಯಿಂದ ನಡೆಯುತ್ತಿರುವ ಶಾಲಾ-ಕಾಲೇಜುಗಳ ಅಭಿವೃದ್ಧಿಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಗರ ಪ್ರದೇಶಗಳ ಖಾಸಗಿ ಶಾಲೆಯಲ್ಲಿ ಸಿಗುವ ಶಿಕ್ಷಣದಂತೆ ಶ್ರೀ ಮಠದಲ್ಲಿಯೂ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದಲ್ಲದೆ ಬಿಡುವಿನ ವೇಳೆ ವಿಶೇಷವಾಗಿ ಸಂಸ್ಕೃತಕ್ಕೆ ಹೆಚ್ಚು ಒತ್ತು ನೀಡಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ ಎಂಬ ವಿಷಯ ಸಂಶೋಧನಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.

ಈ ವೇಳೆ ಪ್ರಾಧಿಕಾರದ ಆಗಮಿಕರಾದ ಕರವೀರ ಸ್ವಾಮಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್, ಹಿರಿಯ ಮುಖಂಡರಾದ ಪೊನ್ನಾಚಿ ಮಹಾದೇವಸ್ವಾಮಿ ಬೇಡಗಂಪಣ ಸಮುದಾಯದ ಗೌರವಾಧ್ಯಕ್ಷ ಪುಟ್ಟಣ್ಣ ಅಧ್ಯಕ್ಷ ಕೆ ವಿ ಮಾದೇಶ್, ಪಾರು ಪತ್ತೇದಾರ ಮಹಾಲಿಂಗನ ಕಟ್ಟೆ ಮಹಾದೇವಸ್ವಾಮಿ, ಸಿಬ್ಬಂದಿಗಳಾದ ರವೀಂದ್ರ, ಉಮೇಶ್, ಸಂಪತ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

43 mins ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

3 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago