ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ರಾಜ್ಯಪಾಲರ ನಡೆಯನ್ನು ಕೋರ್ಟ್ ಒಪ್ಪಿದೆ. ಬೇರೆ ಅರ್ಜಿಗಳನ್ನು ತೆಗೆದುಕೊಳ್ಳದೇ ಈ ಅರ್ಜಿಯನ್ನು ಮಾತ್ರ ಏಕೆ ತೆಗೆದುಕೊಂಡ್ರು? ಆದರೆ ಈ ನಡೆಯಲ್ಲಿ ಕೂಡ ರಾಜಕೀಯ ದಾಳವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಇನ್ನು ರಾಜ್ಯದ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆಯಿದೆ. ಹಾಗಾಗಿ ಚಾರ್ಜ್ಶೀಟ್ ಆದ ಮೇಲೆ ಸಿಎಂ ರಾಜೀನಾಮೆ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ತಿಳಿಸಿದರು.