ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ.
ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್ಐಗಳು.
ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ ತೆರಕಣಾಂಬಿ ಠಾಣೆಯಲ್ಲಿ ಸೇವೆ ಸಲ್ಲಿಸಿ ದೊಡ್ಡರಾಯಪೇಟೆ ಮಹದೇವಸ್ವಾಮಿ ಅವರೂ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ ನಗರಕ್ಕೆ ಬರುತ್ತಿದ್ದರು. ಭಾನುವಾರ ರಾತ್ರಿ ೭.೪೫ರಲ್ಲಿ ಎದುರುಗಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಉಡಿಗಾಲ ಪ್ರವೇಶದ್ವಾರದಲ್ಲಿ ಗುದ್ದಿದೆ. ಪರಿಣಾಮವಾಗಿ ಮಲ್ಲಿಕಾರ್ಜುನಸ್ವಾಮಿ ಅವರ ಭುಜ ಇನ್ನಿತರ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಮಹದೇವಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…