ಚಾಮರಾಜನಗರ

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ 

ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಲೊಕ್ಕನಹಳ್ಳಿ ಒಡೆಯರಪಾಳ್ಯ ಮಾರ್ಗ ಮಧ್ಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿರುವುದು ರೈತರು ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಸಮೀಪ ರಸ್ತೆಯ ಬದಿಯಲ್ಲಿ ಎರಡು ಚಿರತೆ ಕಾಣಿಸಿಕೊಂಡಿರುವುದು ವಾಹನ ಸವಾರರಲ್ಲಿ ನಡುಕ ಪ್ರಾರಂಭವಾಗಿದೆ.

ಮಲೆ ಮಹದೇಶ್ವರ ವನ್ಯಧಾಮ ಹಾಗೂ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೂ ಗಡಿ ಹಂಚಿಕೊಂಡಿರುವುದರಿಂದ ಹುಲಿ ಹಾಗೂ ಚಿರತೆಗಳು ಆಗಾಗ ವಾಹನ ಸವಾರರಿಗೆ ಕಾಣಿಸಿಕೊಳ್ಳುತ್ತಿದೆ.

ಗುರುವಾರ ಸಂಜೆ ಲೊಕ್ಕನಹಳ್ಳಿ ಮಾರ್ಗದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ವಾಹನ ಸವಾರರಿಗೆ ಬಿಆರ್‌ಟಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಎರಡು ಚಿರತೆ ಕಾಣಿಸಿಕೊಂಡಿದೆ. ವಾಹನ ಸವಾರರು ಚಿರತೆಯನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಎಚ್ಚರದಿಂದ ದ್ವಿಚಕ್ರ ವಾಹನ ಸವಾರರು ತೆರಳುವಂತೆ ಮನವಿ ಮಾಡಿದ್ದಾರೆ.

ಕಳೆದ ಹಲವಾರು ತಿಂಗಳಿನಿಂದ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ರೈತರು ಬೆಳೆದ ಬೆಳೆಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಸಾಕು ನಾಯಿಗಳು ಮೇಕೆ ಹಾಡು ಕುರಿಗಳ ಮೇಲೆ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ರೈತರು ಹಲವಾರು ಸಾಕುಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ. ಸಮರ್ಪಕವಾಗಿ ಮಳೆ ಇಲ್ಲದೆ ರೈತರು ಒಂದೆಡೆ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಇನ್ನೊಂದೆಡೆ ಕಾಡು ಪ್ರಾಣಿಗಳ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಳೆದ ಮಂಗಳವಾರವು ಸಹ ಬಂಗಾರು ಎಂಬುವರ ಜಮೀನಿಗೆ ಕಳೆದ ನಾಲ್ಕು ದಿನಗಳಿಂದ ಕಾಡಾನೆ ದಾಳಿ ಮಾಡಿ ಜಮೀನಿನಲ್ಲಿ ಬೆಳೆದಿದ್ದ ತರಕಾರಿ ಬೆಳೆ, ತೆಂಗಿನ ಮರಗಳ ನಾಶಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದನ್ನು ಸ್ಮರಿಸಬಹುದಾಗಿದೆ.

ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಬೆಳೆಗಳನ್ನು ಸಂರಕ್ಷಣೆ ಮಾಡಲು ಹೋಗುವ ರೈತರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ, ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಗಸ್ತು ಮಾಡಲು ನಿಯೋಜಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಪರಿಸರ ಪ್ರೇಮಿ ಎನ್ ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago