ಹನೂರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಗುಂದಿ ಗ್ರಾಮದಲ್ಲಿ ಜರುಗಿದೆ.
ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮದ ಚಾಮರಾಜು (25), ಆಕಾಶ್ ( 22) ಮೃತಪಟ್ಟ ಯುವಕರಾಗಿದ್ದಾರೆ.
ಘಟನೆಯ ವಿವರ: ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದ ನಿವಾಸಿಗಳಾದ ಚಾಮರಾಜು ಚಾಲಕ ವೃತ್ತಿ ಮಾಡಿಕೊಂಡಿದ್ದರೆ ಆಕಾಶ್ ಬೇಕರಿಯಲ್ಲಿ ಕೆಲಸ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಿದ್ದಾರೆ.
ಭಾನುವಾರ ಸಂಬಂಧಿಕರ ಗೃಹಪ್ರವೇಶ ಇದ್ದ ಹಿನ್ನೆಲೆ ಪಿ.ಜಿ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದಾರೆ. ಗೃಹಪ್ರವೇಶ ಮುಗಿಸಿ ದೊಡ್ಡಪ್ಪ ಕೆಂಪರಾಜುರವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೇಲೆ ಬರಲು ಸಾಧ್ಯವಾಗದೆ ಕಾಪಾಡುವಂತೆ ಕೂಗಿಕೊಂಡಿದ್ದಾರೆ. ಇದನ್ನು ಗಮನಿಸಿದ ದೊಡ್ಡಪ್ಪ ಮೇಲೆತ್ತಲು ಇನ್ನಿಲ್ಲದ ಪ್ರಯತ್ನ ನಡೆಸಿ ದಡ ಸೇರಿಸಿದ್ದಾರೆ ಆದರೆ ಅಷ್ಟರ ವೇಳೆಗೆ ಇಬ್ಬರು ಮೃತಪಟ್ಟಿದ್ದರು ಎನ್ನಲಾಗಿದೆ.
ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ತಿಳಿಯುತ್ತಿದ್ದಂತೆ ಹನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…