ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ, ಹಾಗೂ ಟಿ.ಎನ್.ಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮದ ಅಜ್ಮದ ಪಾಷಾ ಬಂಧಿತ ಆರೋಪಿಗಳು. ಸಾಗಾಣಿಕೆ ಬಳಸಿದ್ದ ಗೂಡ್ಸ್ ಆಟೋ ಹಾಗೂ 1096 ಕೆ.ಜಿ ಅಕ್ಕ ಜಪ್ತಿ ಮಾಡಿದ್ದಾರೆ.
ಇವರುಗಳು ಸರ್ಕಾರ ಬಡವರಿಗೆ ನೀಡುವ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಡ ಮಾಡಲು ಗೂಡ್ಸ್ ವಾಹನದಲ್ಲಿ ಕೆಸ್ತೂರು -ಹೊನ್ನೂರು ಕಡೆಯಿಂದ ಮೈಸೂರಿಗೆ ಸಾಗಾಣಿಕೆ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಉಮಾವತಿ ಹಾಗೂ ಆಹಾರ ನಿರೀಕ್ಷಿಕ ಬಿಸಲಾಯ್ಯ ಜಂಟಿ ದಾಳಿ ನಡೆಸಿ ಆರೋಪಿ ಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ದಾಳಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಪರಶಿವಮೂರ್ತಿ ಆರ್, ಪೊಲೀಸ್ ಕಾನ್ಸ್ಟೇಬಲ್ ಬಸವರಾಜ್ ಗುತ್ತಲ್, ಉಸ್ಮಾನ್, ಬಸವರಾಜ, ಶಿವಕುಮಾರ, ಚಾಲಕ ಮಲ್ಲೇಶ್ ಇದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…