ಚಾಮರಾಜನಗರ

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಕೊಳ್ಳೇಗಾಲ ಪಟ್ಟಣದ ಫರ್ಹನ್ ಪಾಷಾ, ಹಾಗೂ ಟಿ.ಎನ್.ಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮದ ಅಜ್ಮದ ಪಾಷಾ ಬಂಧಿತ ಆರೋಪಿಗಳು. ಸಾಗಾಣಿಕೆ ಬಳಸಿದ್ದ ಗೂಡ್ಸ್ ಆಟೋ ಹಾಗೂ 1096 ಕೆ.ಜಿ ಅಕ್ಕ ಜಪ್ತಿ ಮಾಡಿದ್ದಾರೆ.

ಇವರುಗಳು ಸರ್ಕಾರ ಬಡವರಿಗೆ ನೀಡುವ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಡ ಮಾಡಲು ಗೂಡ್ಸ್ ವಾಹನದಲ್ಲಿ ಕೆಸ್ತೂರು -ಹೊನ್ನೂರು ಕಡೆಯಿಂದ ಮೈಸೂರಿಗೆ ಸಾಗಾಣಿಕೆ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಉಮಾವತಿ ಹಾಗೂ ಆಹಾರ ನಿರೀಕ್ಷಿಕ ಬಿಸಲಾಯ್ಯ ಜಂಟಿ ದಾಳಿ ನಡೆಸಿ ಆರೋಪಿ ಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ದಾಳಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಪರಶಿವಮೂರ್ತಿ ಆರ್, ಪೊಲೀಸ್ ಕಾನ್ಸ್ಟೇಬಲ್ ಬಸವರಾಜ್ ಗುತ್ತಲ್, ಉಸ್ಮಾನ್, ಬಸವರಾಜ, ಶಿವಕುಮಾರ, ಚಾಲಕ ಮಲ್ಲೇಶ್ ಇದ್ದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago