ಚಾಮರಾಜನಗರ

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದಲ್ಲಿ ಎಂದಿನಂತೆ 4 ಕಾಡಾನೆಗಳು ನೀರು ಕುಡಿಯಲು ಹೋಗಿದೆ. ನಾಲ್ಕು ಆನೆಗಳ ಪೈಕಿ ಮೂರು ಆನೆಗಳು ಕೆಸರಿನಲ್ಲಿ ಸಿಲುಕಿಕೊಂಡು ಘೀಳಿಡುತ್ತಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿಗಳು ಗಮನಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಭಾಸ್ಕರ್, ಎಸಿಎಪ್ ವಿರಾಜ್ ಹೊಸೂರ್, ವಲಯ ಅರಣ್ಯ ಅಧಿಕಾರಿ ಜಿತೇಂದ್ರ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ ವರ್ಗದವರು ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನು ರಕ್ಷಣೆ ಮಾಡಿದ್ದಾರೆ.

ಆನೆಗಳು ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಮೇವಿಲ್ಲದೆ ನಿತ್ರಾಣಗೊಂಡಿದ್ದವು, ಪಶು ವೈದ್ಯಾಧಿಕಾರಿಗಳು ಆನೆಗಳಿಗೆ ಚಿಕಿತ್ಸೆ ನೀಡುವ ಮೂಲಕ ರಕ್ಷಣೆ ಮಾಡಿದ್ದಾರೆ ಆನೆಗಳು ಚೇತರಿಸಿಕೊಳ್ಳುತ್ತೀವೆ ಎಂದು ತಿಳಿದು ಬಂದಿದೆ.

ಆನೆಗಳ ರಕ್ಷಣೆ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

 

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

7 mins ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

55 mins ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

1 hour ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

2 hours ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

2 hours ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

3 hours ago