ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದಲ್ಲಿ ಎಂದಿನಂತೆ 4 ಕಾಡಾನೆಗಳು ನೀರು ಕುಡಿಯಲು ಹೋಗಿದೆ. ನಾಲ್ಕು ಆನೆಗಳ ಪೈಕಿ ಮೂರು ಆನೆಗಳು ಕೆಸರಿನಲ್ಲಿ ಸಿಲುಕಿಕೊಂಡು ಘೀಳಿಡುತ್ತಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿಗಳು ಗಮನಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಭಾಸ್ಕರ್, ಎಸಿಎಪ್ ವಿರಾಜ್ ಹೊಸೂರ್, ವಲಯ ಅರಣ್ಯ ಅಧಿಕಾರಿ ಜಿತೇಂದ್ರ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ ವರ್ಗದವರು ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನು ರಕ್ಷಣೆ ಮಾಡಿದ್ದಾರೆ.
ಆನೆಗಳು ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಮೇವಿಲ್ಲದೆ ನಿತ್ರಾಣಗೊಂಡಿದ್ದವು, ಪಶು ವೈದ್ಯಾಧಿಕಾರಿಗಳು ಆನೆಗಳಿಗೆ ಚಿಕಿತ್ಸೆ ನೀಡುವ ಮೂಲಕ ರಕ್ಷಣೆ ಮಾಡಿದ್ದಾರೆ ಆನೆಗಳು ಚೇತರಿಸಿಕೊಳ್ಳುತ್ತೀವೆ ಎಂದು ತಿಳಿದು ಬಂದಿದೆ.
ಆನೆಗಳ ರಕ್ಷಣೆ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…