ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದಲ್ಲಿ ಎಂದಿನಂತೆ 4 ಕಾಡಾನೆಗಳು ನೀರು ಕುಡಿಯಲು ಹೋಗಿದೆ. ನಾಲ್ಕು ಆನೆಗಳ ಪೈಕಿ ಮೂರು ಆನೆಗಳು ಕೆಸರಿನಲ್ಲಿ ಸಿಲುಕಿಕೊಂಡು ಘೀಳಿಡುತ್ತಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವುದನ್ನು ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿಗಳು ಗಮನಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿ ಸಿ ಎಫ್ ಭಾಸ್ಕರ್, ಎಸಿಎಪ್ ವಿರಾಜ್ ಹೊಸೂರ್, ವಲಯ ಅರಣ್ಯ ಅಧಿಕಾರಿ ಜಿತೇಂದ್ರ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಹಾಗೂ ಸಿಬ್ಬಂದಿ ವರ್ಗದವರು ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಮೂರು ಆನೆಗಳನ್ನು ರಕ್ಷಣೆ ಮಾಡಿದ್ದಾರೆ.
ಆನೆಗಳು ಹಲವು ಗಂಟೆಗಳ ಕಾಲ ನೀರಿನಲ್ಲಿಯೇ ಇದ್ದಿದ್ದರಿಂದ ಮೇವಿಲ್ಲದೆ ನಿತ್ರಾಣಗೊಂಡಿದ್ದವು, ಪಶು ವೈದ್ಯಾಧಿಕಾರಿಗಳು ಆನೆಗಳಿಗೆ ಚಿಕಿತ್ಸೆ ನೀಡುವ ಮೂಲಕ ರಕ್ಷಣೆ ಮಾಡಿದ್ದಾರೆ ಆನೆಗಳು ಚೇತರಿಸಿಕೊಳ್ಳುತ್ತೀವೆ ಎಂದು ತಿಳಿದು ಬಂದಿದೆ.
ಆನೆಗಳ ರಕ್ಷಣೆ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…