ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ ಸಂಜೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ನೆರವೇರಿತು.

ಯುಗಾದಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಹಣ್ಣು, ತರಕಾರಿ, ಫಲ, ಪುಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ಜತೆಗೆ ದೇಗುಲದ ಸುತ್ತಲು ವಿವಿಧ ಹೂಗಳಿಂದ ಸಿಂಗಾರ ಮಾಡಲಾಗಿತ್ತು.

ಮಂಗಳವಾರ ಬೆಳಿಗ್ಗೆ ಸ್ವಾಮಿಗೆ ಹಾಲು ಮೊಸರು ಎಳನೀರು ಹಾಗೂ ಇನ್ನಿತರ ಅದ್ರ ಮೇಲೆ ಅಭಿಷೇಕ ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸಲಾಯಿತು. ದೇಗುಲದಿಂದ ಆಗಮಿಸಿದ ಪೇಡಕಂಪನ ಅರ್ಚಕರು ಭಕ್ತರ ಸಮ್ಮುಖದಲ್ಲಿ ಸತ್ತಿಗೆ ಸೂರಿಪಾನಿ ಮತ್ತು ವಾದ್ಯ ಮೇಳಗಳೊಂದಿಗೆ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ಮಾದಪ್ಪನ ಸನ್ನಿಧಿಗೆ ತೆರೆದುಯಲಾಯಿತು , ಬಳಿಕ ಮಹಾ ಮಂಗಳಾರತಿ ಬೆಳಗಿಸಿ ಬರಮಾಡಿಕೊಳ್ಳಲಾಯಿತು.

ಉತ್ಸವಮೂರ್ತಿಯನ್ನು ಮೆರವಣಿಗೆಯ ಮೂಲಕ ಮಾದಪ್ರದ ಸನ್ನಿಧಿಗೆ ಕರೆದೊಯ್ದ ಲಾಯಿತು. ಬಳಿಕ ಮಹಾ ಮಂಗಳಾರತಿ ಬೆಳಗಿಸಿ ಬರಮಾಡಿಕೊಳ್ಳಲಾಯಿತು.

ಮಾರ್ಚ್ 18ರಂದು ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಸೇವೆ ಹಾಗೂ ಉತ್ಸವದಿಗಳು ಜರುಗಲಿದೆ ಮಾರ್ಚ್ 19 ರಂದು ಯುಗಾದಿ ಅಮಾವಾಸ್ಯೆ ಮಹಾ ರಥೋತ್ಸವ ಬೆಳಗ್ಗೆ 9:45 ರಿಂದ 11 ಗಂಟೆಯವರೆಗೆ ಜರುಗಲಿದೆ.

ಕಣ್ಮನ ಸೆಳೆಯುತ್ತಿದೆ ಹೂವಿನ ಅಲಂಕಾರ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ವಿವಿಧ ಫಲ ಪುಷ್ಪ, ಕಬ್ಬು, ಭತ್ತ ಹಣ್ಣು ತರಕಾರಿಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಈ ಬಾರಿ ದೇವಸ್ಥಾನದ ವತಿಯಿಂದ ಹೂವಿನ ಅಲಂಕಾರ ಮಾಡಲಾಗಿದ್ದು ಆನೇಕಲ್ ಗ್ರಾಮದ ಮಂಜು ಮತ್ತು ತಂಡದವರು ವಿಶೇಷ ಅಲಂಕಾರ ಮಾಡಿದ್ದಾರೆ. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮಾಡಿರುವುದರಿಂದ ಭಕ್ತಾದಿಗಳ ಕಣ್ಮನ ಸೆಳೆಯುತ್ತಿದೆ.

ಪ್ರಸಾದ ಪರಿಶೀಲನೆ ನಡೆಸಿದ ಕಾರ್ಯದರ್ಶಿ ರಘು
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ದಿನಗಳ ಕಾಲ ವರೆಗೆ ನಡೆಯಲಿರುವ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಲಿದ್ದಾರೆ ಮಂಗಳವಾರವು ಸಹ ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಲು ದಾಸೋಹ ಭವನಕ್ಕೆ ಭೇಟಿ ನೀಡಿದ್ದರು. ಮಂಗಳವಾರ ಭಕ್ತಾದಿಗಳಿಗೆ ಸಿದ್ಧಪಡಿಸಲಾಗಿದ್ದ ಪ್ರಸಾದವನ್ನು ಕಾರ್ಯದರ್ಶಿ ಎಈ ರಘು ಪರಿಶೀಲನೆ ನಡೆಸಿ ಖುದ್ದು ಪ್ರಸಾದ ಸೇವಿಸಿ, ಪ್ರತಿನಿತ್ಯದಂತೆ ಜಾತ್ರಾ ಮಹೋತ್ಸವದಲ್ಲಿಯೂ ಗುಣಮಟ್ಟದ ಆಹಾರ ಪದಾರ್ಥಗಳನ್ನು ಬಳಕೆ ಮಾಡಿ ಪ್ರಸಾದ ನೀಡುವಂತೆ ಸೂಚನೆ ನೀಡಿದ್ದಾರೆ.

ಬೇವು ಬೆಲ್ಲ ವಿತರಣೆ
ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರು ಭಕ್ತರಿಗೆ ಬೇವು ಬೆಲ್ಲ ವಿತರಣೆ ಮಾಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago