gundlupete
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ದಂಡ ವಿಧಿಸಿದೆ.
ಕಾಡಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೇ ರಸ್ತೆ ಸಮೀಪವೇ ಫೋಟೋಶೂಟ್ ಮಾಡಿಸುತ್ತಿದ್ದ ಬೆಂಗಳೂರು ಮೂಲಕ ಯುವಕ ಹಾಗೂ ಯುವತಿಗೆ ಭಾರೀ ದಂಡ ವಿಧಿಸಲಾಗಿದೆ.
ಬಂಡೀಪುರದ ಮಂಗಲ ರಸ್ತೆ ಸಮೀಪ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರು ಕಾಡಿನೊಳಗೆ ಅತಿಕ್ರಮ ಪ್ರವೇಶಿಸಿ ಫೋಟೋಶೂಟ್ ಮಾಡಿಸಿದ್ದರು.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಪ್ರವಾಸಿಗರು, ಈ ವಿಡಿಯೋವನ್ನು ಬಂಡೀಪುರ ಎಸಿಎಫ್ ನವೀನ್ ಕುಮಾರ್ ಅವರಿಗೆ ಕಳುಹಿಸಿ ದೂರು ನೀಡಿದ್ದರು.
ಇದನ್ನೂ ಓದಿ:- ‘ಬುಲೆಟ್’ ಮೇಲೆ ಬಂದ ಧರ್ಮ ಕೀರ್ತಿರಾಜ್; ಜೂನ್ 20ಕ್ಕೆ ಚಿತ್ರ ಬಿಡುಗಡೆ
ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಲ್ಲವಿ ಮತ್ತು ಘೋಷ್ ಎಂಬುವವರನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿದ್ದಲ್ಲದೇ 25 ಸಾವಿರ ದಂಡ ಕಟ್ಟಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…