ಚಾಮರಾಜನಗರ: ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿ ಕಲಾ ಪ್ರದರ್ಶನಕ್ಕೆ ಯಾವುದೇ ಮೂಲಭೂತ ಸೌಕರ್ಯ ಇಲ್ಲ. ಮೇಲ್ನೋಟಕ್ಕೆ ಸುಂದರವಾಗಿ ಕಾಣುವ ರಂಗಮಂದಿರದಲ್ಲಿ ಸೌಲಭ್ಯಗಳಿಲ್ಲದೇ ಕಳೆಗುಂದಿದಂತೆ ಕಾಣುತ್ತಿದೆ.
ರಂಗಮಂದಿರಲ್ಲಿ ಪ್ರಮುಖವಾಗಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆ ಇರಬೇಕು. ಇದರ ಜೊತೆ ಜೊತೆಗೆ ಕುಡಿಯುವ ನೀರು, ಶೌಚಾಲಯ, ಭದ್ರತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳೂ ಇರಬೇಕು. ಆದರೆ ಇಲ್ಲಿ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ ಇಲ್ಲಿ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದ್ದು, ಭವನದ ಸ್ವಚ್ಛತೆಗೆ ಹಾಗೂ ಭದ್ರತೆಗೆ ಒಬ್ಬ ಸಿಬ್ಬಂದಿಯೂ ಇಲ್ಲ. ಪರಿಣಾಮ ಅಲ್ಲಲ್ಲಿ ಅನೈರ್ಮಲ್ಯ ಕಾಡುತ್ತಿದ್ದು, ರೋಗ ಹರಡುವ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಸಿಬ್ಬಂದಿಗಳನ್ನು ನೇಮಿಸಿ, ಇಲ್ಲಿ ಶುಚಿತ್ವ ಕಾಪಾಡಬೇಕು. ಬಳಿಕ ಕಲಾವಿದರಿಗೆ ಉತ್ತಮ ವೇದಿಕೆ ಸಿದ್ಧಗೊಳ್ಳಬೇಕು ಎಂದು ಕಲಾರಸಿಕರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…
ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…