ಚಾಮರಾಜನಗರ: ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಕಳೆದ 2022ರಲ್ಲಿ 6.5 ಕೋಟಿ ರೂ ವೆಚ್ಚದಲ್ಲಿ ವರನಟ ಡಾ.ರಾಜ್ ಕುಮಾರ್ ರಂಗಮಂದಿರ ನಿರ್ಮಾಣ ಮಾಡಲಾಗಿದೆ. ಆದರೆ ಇಲ್ಲಿ ಕಲಾ ಪ್ರದರ್ಶನಕ್ಕೆ ಯಾವುದೇ ಮೂಲಭೂತ ಸೌಕರ್ಯ ಇಲ್ಲ. ಮೇಲ್ನೋಟಕ್ಕೆ ಸುಂದರವಾಗಿ ಕಾಣುವ ರಂಗಮಂದಿರದಲ್ಲಿ ಸೌಲಭ್ಯಗಳಿಲ್ಲದೇ ಕಳೆಗುಂದಿದಂತೆ ಕಾಣುತ್ತಿದೆ.
ರಂಗಮಂದಿರಲ್ಲಿ ಪ್ರಮುಖವಾಗಿ ಧ್ವನಿ ಹಾಗೂ ಬೆಳಕಿನ ವ್ಯವಸ್ಥೆ ಇರಬೇಕು. ಇದರ ಜೊತೆ ಜೊತೆಗೆ ಕುಡಿಯುವ ನೀರು, ಶೌಚಾಲಯ, ಭದ್ರತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳೂ ಇರಬೇಕು. ಆದರೆ ಇಲ್ಲಿ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ ಇಲ್ಲಿ ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುತ್ತಿದ್ದು, ಭವನದ ಸ್ವಚ್ಛತೆಗೆ ಹಾಗೂ ಭದ್ರತೆಗೆ ಒಬ್ಬ ಸಿಬ್ಬಂದಿಯೂ ಇಲ್ಲ. ಪರಿಣಾಮ ಅಲ್ಲಲ್ಲಿ ಅನೈರ್ಮಲ್ಯ ಕಾಡುತ್ತಿದ್ದು, ರೋಗ ಹರಡುವ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಸಿಬ್ಬಂದಿಗಳನ್ನು ನೇಮಿಸಿ, ಇಲ್ಲಿ ಶುಚಿತ್ವ ಕಾಪಾಡಬೇಕು. ಬಳಿಕ ಕಲಾವಿದರಿಗೆ ಉತ್ತಮ ವೇದಿಕೆ ಸಿದ್ಧಗೊಳ್ಳಬೇಕು ಎಂದು ಕಲಾರಸಿಕರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…