ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಸುಮಾರು 30-35 ವರ್ಷ ವಯೋಮಿತಿಯ ಮೃತನ ಎದೆಯ ಮೇಲೆ ನಂದ ಹಾಗೂ ವಿವೇಕ ಎಂಬ ಹಚ್ಚೆಯಿದೆ. ನೀಲಿ ಮತ್ತು ಕಪ್ಪು ಬಣ್ಣದ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟನ್ನು ಧರಿಸಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತನ ಪತ್ತೆಗೆ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ.





