ಚಾಮರಾಜನಗರ

ಡಿ 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ೬೬ನೇ ಪರಿನಿಬ್ಬಾಣ ದಿನ ಅಂಗವಾಗಿ ಸ್ವಾತಂತ್ತ್ಯ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್, ಬಿಜೆಪಿ ದುರಾಡಳಿತದ ವಿರುದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಯೋಜಿಸಲಾಗಿದೆ. ಈ ಸಮಾವೇಶಕ್ಕೆ ಜಿಲ್ಲೆಯ ಹಳ್ಳಿಹಳ್ಳಿಯಿಂದಲ್ಲೂ ಭಾಗವಹಿಸುವ ಮೂಲಕ ಯಶ್ವಸಿಗೊಳಿಸಿಕೊಡುವಂತೆ ನಾಗರಾಜು ಮನವಿ ಮಾಡಿದರು.

ಈ ಸಮಾವೇಶಕ್ಕೆ ಜಿಲ್ಲೆಯಿಂದ ೨೦೦ಕ್ಕೂ ಹೆಚ್ಚು ಬಸ್‌ಗಳ ಮೂಲಕ ಭಾಗವಹಿಸುವ ಗುರಿಯಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಎಲ್ಲಾ ರಂಗಗಳಲ್ಲೂ ಅಧ:ಪತನದತ್ತ ಸಾಗುತ್ತಿದೆ. ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟಾಗಿದೆ. ನಿರುದ್ಯೋಗ ಸಮಸ್ಯೆ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ಕೋಮು ರಾಜಕೀಯ ವಿಜೃಂಭಿಸುತ್ತದೆ. ನ್ಯಾಯ ಕೇಳುವವರು ದೇಶದ್ರೋಹಿಗಳಾಗುತ್ತಿದ್ದಾರೆ ಎಂದರು.

andolana

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

7 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

7 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

7 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

7 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

8 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

8 hours ago