ಚಾಮರಾಜನಗರ

ಡಿ 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ೬೬ನೇ ಪರಿನಿಬ್ಬಾಣ ದಿನ ಅಂಗವಾಗಿ ಸ್ವಾತಂತ್ತ್ಯ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್, ಬಿಜೆಪಿ ದುರಾಡಳಿತದ ವಿರುದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಯೋಜಿಸಲಾಗಿದೆ. ಈ ಸಮಾವೇಶಕ್ಕೆ ಜಿಲ್ಲೆಯ ಹಳ್ಳಿಹಳ್ಳಿಯಿಂದಲ್ಲೂ ಭಾಗವಹಿಸುವ ಮೂಲಕ ಯಶ್ವಸಿಗೊಳಿಸಿಕೊಡುವಂತೆ ನಾಗರಾಜು ಮನವಿ ಮಾಡಿದರು.

ಈ ಸಮಾವೇಶಕ್ಕೆ ಜಿಲ್ಲೆಯಿಂದ ೨೦೦ಕ್ಕೂ ಹೆಚ್ಚು ಬಸ್‌ಗಳ ಮೂಲಕ ಭಾಗವಹಿಸುವ ಗುರಿಯಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಎಲ್ಲಾ ರಂಗಗಳಲ್ಲೂ ಅಧ:ಪತನದತ್ತ ಸಾಗುತ್ತಿದೆ. ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟಾಗಿದೆ. ನಿರುದ್ಯೋಗ ಸಮಸ್ಯೆ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ಕೋಮು ರಾಜಕೀಯ ವಿಜೃಂಭಿಸುತ್ತದೆ. ನ್ಯಾಯ ಕೇಳುವವರು ದೇಶದ್ರೋಹಿಗಳಾಗುತ್ತಿದ್ದಾರೆ ಎಂದರು.

andolana

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

6 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

12 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

12 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

12 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

12 hours ago