ಚಾಮರಾಜನಗರ

ಡಿ 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ೬೬ನೇ ಪರಿನಿಬ್ಬಾಣ ದಿನ ಅಂಗವಾಗಿ ಸ್ವಾತಂತ್ತ್ಯ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶ ಮಾಡುತ್ತಿರುವ ಆರ್‌ಎಸ್‌ಎಸ್, ಬಿಜೆಪಿ ದುರಾಡಳಿತದ ವಿರುದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ, ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಯೋಜಿಸಲಾಗಿದೆ. ಈ ಸಮಾವೇಶಕ್ಕೆ ಜಿಲ್ಲೆಯ ಹಳ್ಳಿಹಳ್ಳಿಯಿಂದಲ್ಲೂ ಭಾಗವಹಿಸುವ ಮೂಲಕ ಯಶ್ವಸಿಗೊಳಿಸಿಕೊಡುವಂತೆ ನಾಗರಾಜು ಮನವಿ ಮಾಡಿದರು.

ಈ ಸಮಾವೇಶಕ್ಕೆ ಜಿಲ್ಲೆಯಿಂದ ೨೦೦ಕ್ಕೂ ಹೆಚ್ಚು ಬಸ್‌ಗಳ ಮೂಲಕ ಭಾಗವಹಿಸುವ ಗುರಿಯಿದ್ದು, ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶ ಎಲ್ಲಾ ರಂಗಗಳಲ್ಲೂ ಅಧ:ಪತನದತ್ತ ಸಾಗುತ್ತಿದೆ. ಸಂವಿಧಾನದ ಆಶಯಗಳು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಗಂಟಾಗಿದೆ. ನಿರುದ್ಯೋಗ ಸಮಸ್ಯೆ ಯುವ ಜನಾಂಗವನ್ನು ಹತಾಶೆಗೆ ದೂಡಿದೆ. ಕೋಮು ರಾಜಕೀಯ ವಿಜೃಂಭಿಸುತ್ತದೆ. ನ್ಯಾಯ ಕೇಳುವವರು ದೇಶದ್ರೋಹಿಗಳಾಗುತ್ತಿದ್ದಾರೆ ಎಂದರು.

andolana

Recent Posts

ಫಿಫಾ ವಿಶ್ವಕಪ್‌ ಕ್ರೇಜ್‌ : ನಾಳೆ ಕೇರಳದಲ್ಲಿ ಶಾಲಾ ಕಾಲೇಜಿಗೆ ರಜೆ

ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್‌ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ…

3 hours ago

ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

8 hours ago

ಚೆನ್ನಮ್ಮ ನಿಧನ: ಇಂದು, ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ…

9 hours ago

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ

ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…

15 hours ago

ಓದುಗರ ಪತ್ರ: ಗೋಲ್ಡನ್ ಪಾಸ್‌ನ ‘ಗೌರವ’ ಕಾಪಾಡಿ

ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ…

15 hours ago

ಓದುಗರ ಪತ್ರ: ರೈತರ ವಿರೋಧ ಕಟ್ಟಿಕೊಳ್ಳುವುದೇಕೆ?

ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…

15 hours ago